ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.
ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.
ಏನಿದು ಪ್ರಕರಣ?
ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.
ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…