News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

648

ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

 ಮೂಲ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ  ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ  ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.

ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.

ಏನಿದು ಪ್ರಕರಣ?

ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ  ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು  ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.

ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…