ಉಪಯುಕ್ತ ಮಾಹಿತಿ

“ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

6289

ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ?  ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.

ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.

ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.

 

 

ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.

ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.

ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.

ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .

ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.

ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .

ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…