News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

372

ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ವೃಷಭ:-

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್‌ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಕಟಕ :-

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ಕನ್ಯಾ :-

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ತುಲಾ:

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವೃಶ್ಚಿಕ :-

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಕುಂಭ:-

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…