ಜ್ಯೋತಿಷ್ಯ

ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

153

ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ.  ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ವೃಷಭ:-

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ಮಿಥುನ:

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.  ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ಕಟಕ :-

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

 ಸಿಂಹ:

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕನ್ಯಾ :-

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ತುಲಾ:

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ವೃಶ್ಚಿಕ :-

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ಧನಸ್ಸು:

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ಮಕರ :-

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ  ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಕುಂಭ:-

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆ‌ಮ್ಮದಿ. ದಿನಾಂತ್ಯದಲ್ಲಿ ಶುಭ.

ಮೀನ:-

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ.  ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…