ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.
ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.