ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…