ಸಿನಿಮಾ

ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

342

ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು  ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಧ್ರುವ ಅವರನ್ನು, ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಧ್ರುವ  ಸಾವನ್ನಪ್ಪಿದ್ದಾರೆ. ವಿಕಲಚೇತನ ಪತ್ರಿಭೆಯಾಗಿದ್ದ ಧ್ರುವ, ಸಿಸಿಎಲ್‌ ಮತ್ತು ನಟನೆ ಮೂಲಕ ಗುರುತಿಸಿಕೊಂಡಿದ್ದರು. ನಟ ಧ್ರುವ, ಕಿಚ್ಚ ಸುದೀಪ್ ಅವರ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಉತ್ತಮ ಆಟಗಾರರಾಗಿದ್ದರು.

35 ವರ್ಷದ  ಧ್ರುವ ಶರ್ಮಾ ಪತ್ನಿ ಮತ್ತು 7 ವರ್ಷದ ಮಗಳು, 4 ವರ್ಷದ ಮಗನನ್ನು ಅಗಲಿದ್ದಾರೆ. ಧ್ರುವ ಅವರ ತಂದೆ ಸುರೇಶ್ ಶರ್ಮಾ ಕೂಡ ನಟ, ನಿರ್ಮಾಪರ,  ಫೈನಾನ್ಶಿಯರ್ ಹಾಗೂ ನಿರ್ದೇಶಕರಾಗಿದ್ದು, ಈ ಹಿಂದೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಉದ್ಯಮಿ, ನಟರೂ ಆಗಿರುವ ಸತೀಶ್ ಶರ್ಮಾ ಅವರ ಪುತ್ರರಾಗಿರುವ ಧ್ರುವ ಶರ್ಮಾ 2005ರಲ್ಲಿ ವಿಶ್ವ ಕಿವುಡರ ಕ್ರಿಕೆಟ್‍ನಲ್ಲಿ ಭಾರತ ತಂಡದಲ್ಲಿ ಆಡಿದ್ದರು. ವಾಕ್-ಶ್ರವಣ ದೋಷದಿಂದಾಗಿ ಬಾಲ್ಯದಿಂದಲೇ ಸಾಕಷ್ಟು ಅವಮಾನ ಎದುರಿಸಿದ್ದ ಧ್ರುವ ಶರ್ಮಾ ಆ ಎಲ್ಲ ನಿಂದನೆಗಳನ್ನು ಮೆಟ್ಟಿ ನಿಂತಿದ್ದರು.

ಮೂಗ ಮತ್ತು ಕಿವುಡರಾಗಿದ್ದ ಧ್ರುವ ತಮ್ಮ ಅಮೋಘ ಅಭಿನಯ ಹಾಗೂ ಕ್ರಿಕೆಟ್‌ ನಿಂದ ಎಲ್ಲರ ಗಮನ ಸೆಳೆದಿದ್ದರು. 2007ರಲ್ಲಿ ತಮ್ಮ 25ನೇ ವರ್ಷ ವಯಸ್ಸಿನಲ್ಲಿ ಸ್ನೇಹಾಂಜಲಿ ಎಂಬ ಚಲನಚಿತ್ರದಲ್ಲಿ ನಾಯಕರಾಗಿ ನಟಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. ಧ್ರುವ್ ಅವರ ಹಠಾತ್ ಸಾವಿಗೆ ಚಿತ್ರರಂಗದ ಅನೇಕ ಗಣ್ಯರು, ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…