ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…