ರಾಜಕೀಯ

ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

692

ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.

ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್‍ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್‍ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.

ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..

ಆರ್‍ಬಿಐಗೆ  ಎಷ್ಟು ನೋಟು ಬಂದಿದೆ?


ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್‍ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್‍ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ನೀವೆಂದಾದರೂ ಸಮುದ್ರದ ತೀರದಲ್ಲಿ ಈ ತರಹದ ಮೊಟ್ಟೆಗಳನ್ನು ಕಂಡಿದ್ದೀರಾ..? ಏನಿದು ಗೊತ್ತೇ..?

    ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್‌ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.