ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…