Uncategorized

ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

173

ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….

ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು.

237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್‌ ಗಳಿಸಿದರು. ಆದರೆ  ಜಮಾನ್‌ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್‌ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್‌ ಮತ್ತು ಫಾಹಿಮ್‌ ಅಶ್ರಫ್‌ ಜೀವ ತುಂಬಿದರು.

ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್‌ ಸೇರಿಸಿದರು. ಫಾಹಿಮ್‌ ರನೌಔಟ್‌ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್‌ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್‌ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್‌ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.

ಬೌಲರ್‌–ಬ್ಯಾಟ್ಸ್‌ಮನ್‌ ಸಮಬಲದ ಹೋರಾಟ: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್‌ ಅವರ ತಾಳ್ಮೆಯ 39 ರನ್‌ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್‌, ಜುನೈದ್‌ ಖಾನ್‌, ಫಾಹಿಮ್ ಅಶ್ರಫ್‌ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.

ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್‌ 13 ರನ್‌ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್‌  ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.

50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್‌ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್‌ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್‌ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್‌ ಗಳಿಸುತ್ತ ಸಾಗಿದರು. ಅಷ್ಟರಲ್ಲಿ  ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್‌ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್‌ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್‌:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…