News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Uncategorized

ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

180

ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….

ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು.

237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್‌ ಗಳಿಸಿದರು. ಆದರೆ  ಜಮಾನ್‌ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್‌ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್‌ ಮತ್ತು ಫಾಹಿಮ್‌ ಅಶ್ರಫ್‌ ಜೀವ ತುಂಬಿದರು.

ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್‌ ಸೇರಿಸಿದರು. ಫಾಹಿಮ್‌ ರನೌಔಟ್‌ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್‌ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್‌ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್‌ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.

ಬೌಲರ್‌–ಬ್ಯಾಟ್ಸ್‌ಮನ್‌ ಸಮಬಲದ ಹೋರಾಟ: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್‌ ಅವರ ತಾಳ್ಮೆಯ 39 ರನ್‌ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್‌, ಜುನೈದ್‌ ಖಾನ್‌, ಫಾಹಿಮ್ ಅಶ್ರಫ್‌ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.

ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್‌ 13 ರನ್‌ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್‌  ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.

50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್‌ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್‌ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್‌ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್‌ ಗಳಿಸುತ್ತ ಸಾಗಿದರು. ಅಷ್ಟರಲ್ಲಿ  ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್‌ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್‌ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್‌:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….