News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized

ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

181

ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….

ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು.

237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್‌ ಗಳಿಸಿದರು. ಆದರೆ  ಜಮಾನ್‌ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್‌ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್‌ ಮತ್ತು ಫಾಹಿಮ್‌ ಅಶ್ರಫ್‌ ಜೀವ ತುಂಬಿದರು.

ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್‌ ಸೇರಿಸಿದರು. ಫಾಹಿಮ್‌ ರನೌಔಟ್‌ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್‌ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್‌ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್‌ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.

ಬೌಲರ್‌–ಬ್ಯಾಟ್ಸ್‌ಮನ್‌ ಸಮಬಲದ ಹೋರಾಟ: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್‌ ಅವರ ತಾಳ್ಮೆಯ 39 ರನ್‌ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್‌, ಜುನೈದ್‌ ಖಾನ್‌, ಫಾಹಿಮ್ ಅಶ್ರಫ್‌ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.

ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್‌ 13 ರನ್‌ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್‌  ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.

50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್‌ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್‌ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್‌ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್‌ ಗಳಿಸುತ್ತ ಸಾಗಿದರು. ಅಷ್ಟರಲ್ಲಿ  ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್‌ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್‌ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್‌:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಕರ್ನಾಟಕ, ಸಿನಿಮಾ

    ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

    ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…