News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized

ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

179

ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….

ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು.

237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್‌ ಗಳಿಸಿದರು. ಆದರೆ  ಜಮಾನ್‌ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್‌ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್‌ ಮತ್ತು ಫಾಹಿಮ್‌ ಅಶ್ರಫ್‌ ಜೀವ ತುಂಬಿದರು.

ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್‌ ಸೇರಿಸಿದರು. ಫಾಹಿಮ್‌ ರನೌಔಟ್‌ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್‌ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್‌ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್‌ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.

ಬೌಲರ್‌–ಬ್ಯಾಟ್ಸ್‌ಮನ್‌ ಸಮಬಲದ ಹೋರಾಟ: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್‌ ಅವರ ತಾಳ್ಮೆಯ 39 ರನ್‌ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್‌, ಜುನೈದ್‌ ಖಾನ್‌, ಫಾಹಿಮ್ ಅಶ್ರಫ್‌ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.

ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್‌ 13 ರನ್‌ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್‌  ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.

50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್‌ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್‌ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್‌ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್‌ ಗಳಿಸುತ್ತ ಸಾಗಿದರು. ಅಷ್ಟರಲ್ಲಿ  ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್‌ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್‌ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್‌:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.