inspirational

ಹವಾ ಮಹಲ್

65

  ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್‌ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ

ಕಛ್‌ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್‌ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್‌ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು


ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್‌ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್‌ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ

ಹವಾ ಮಹಲ್ ಮಹಾರಾಜ ಜೈ ಸಿಂಗ್‌ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್‌ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್‌ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್‌ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್‌ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.

ಹವಾ ಮಹಲ್‌ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ

Source internet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸುದ್ದಿ

    ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

    ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.