ಉಪಯುಕ್ತ ಮಾಹಿತಿ

ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

1324

ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು  ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.

ಆರೋಗ್ಯದ ವಿಷಯಕ್ಕೆ  ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ:-

ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಶುದ್ಧ ತುಪ್ಪವನ್ನು ಪರೀಕ್ಷಿಸುವುದು ಹೇಗೆ?

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ  ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪವನ್ನು ಪರೀಕ್ಷಿಸುವ ವಿಧಾನ :-

 

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • inspirational, ಸುದ್ದಿ

    ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

    ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…