ಉಪಯುಕ್ತ ಮಾಹಿತಿ

ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

1293

ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ! ಮಿಳ್ಳೆ ಈಗ ಅದೃಶ್ಯವಾಗಿರುವ ಕಾರಣ ತುಪ್ಪದ ಸೇವನೆಯ ಪ್ರಮಾಣ ಮತ್ತು ನಿಮ್ಮ ಇಂದಿನ ದೇಹಸ್ಥಿತಿಯನ್ನು ಪರಿಗಣಿಸಿ ಎಷ್ಟು  ಸೇವಿಸ ಬಹುದು ಎಂಬುದನ್ನು ನಿಮ್ಮ ಕುಟುಂಬ ವೈದ್ಯರು ಸಲಹೆ ನೀಡಬಲ್ಲರು. ಆ ಪ್ರಕಾರವೇ ಸೇವಿಸಿದರೆ ಉತ್ತಮ.

ಆರೋಗ್ಯದ ವಿಷಯಕ್ಕೆ  ಬಂದಾಗ ತುಪ್ಪ ಮಹತ್ವದ ಪಾತ್ರ ವಹಿಸುತ್ತದೆ:

ಜಿಡ್ಡಿನ ಪದಾರ್ಥಗಳಲ್ಲೇ ಅತಿ ಆರೋಗ್ಯಕರವಾದ ತುಪ್ಪ ಹಲವು ಉತ್ತಮ ಗುಣಗಳನ್ನು ಹೊಂದಿದೆ. ಇದರಲ್ಲಿ ಅತಿ ಹೆಚ್ಚಿನ ಪ್ರಮಾಣ ದಲ್ಲಿರುವ ಕ್ಯಾಲೋರಿಗಳು,ಇ ಪೋಷಕಾಂಶ ಗಳು, ವೈರಸ್ಸಿನ ವಿರುದ್ಧ ಹೋರಾಡುವ ಗುಣ, ಶಿಲಿಂಧ್ರ ನಿವಾರಕ, ಬ್ಯಾಕ್ಟೀರಿಯಾ ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ ನಿವಾರಕ ಗುಣಗಳು ಮತ್ತು ಅಂಟಿ ಆಕ್ಸಿಡೆಂಟುಗಳ ಜೊತೆಗೆ ಕೊಂಚ ಕೊಬ್ಬಿನ ತೈಲವೂ ಇವೆ. ಆದರೆ ಎಮ್ಮೆಯ ಹಾಲಿನಿಂದ ತಯಾರಿಸಿದ ತುಪ್ಪದಲ್ಲೂ ಬಹುತೇಕ ಈ ಗುಣಗಳಿದ್ದರೂ ಕೊಬ್ಬಿನ ಪ್ರಮಾಣ ಅಪಾರ ವಾದುದರಿಂದ ಎಮ್ಮೆ ಹಾಲಿನ ತುಪ್ಪಕ್ಕಿಂತ ಹಸುವಿನ ಹಾಲಿನ ತುಪ್ಪವೇ ಉತೃಷ್ಕವಾಗಿದೆ. ಸಾಮಾನ್ಯವಾಗಿ ಅನ್ನ, ಚಪಾತಿ, ಸಿಹಿ ಮೊದಲಾದ ಯಾವುದೇ ಆಹಾರದೊಂದಿಗೆ ಕೊಂಚ ತುಪ್ಪವನ್ನು ಬೆರೆಸಿ ತಿಂದರೆ ಆ ಖಾದ್ಯದ ರುಚಿ ಬಹಳಷ್ಟು ಹೆಚ್ಚುತ್ತದೆ. ಅಷ್ಟೆ ಅಲ್ಲ, ಹಸುವಿನ ತುಪ್ಪವನ್ನು ಉಪಯೋಗಿಸಿ ಮೈಯನ್ನು ಮಸಾಜ್ ಮಾಡಿದರೆ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.

ದೇಸೀ ಹಸುವಿನ ತುಪ್ಪ, ಆರೋಗ್ಯದ ಪಾಲಿನ ಸಂಜೀವಿನಿ:-

ಸುಟ್ಟ ಗಾಯಕ್ಕೆ, ಚಿಕ್ಕ ಪುಟ್ಟ ತರಚು ಗಾಯಗಳಿಗೆ ತುಪ್ಪವನ್ನು ಹಚ್ಚುವ ಮೂಲಕ ಗಾಯಗಳು ಬೇಗನೇ ಮಾಗುತ್ತವೆ. ಅಷ್ಟೆ ಅಲ್ಲ ಇದರ ನಿಯಮಿತ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ತೊಲಗಿಸಲೂ ಸಾಧ್ಯವಾಗುತ್ತದೆ. ಜೀವರಾಸಾಯನಿಕ ಕ್ರಿಯೆ ಹೆಚ್ಚಿಸುವುದು, ಕೂದಲು ಉದುರುವುದನ್ನು ತಡೆಗಟ್ಟುವುದು, ಹೃದಯ ಕ್ಷಮತೆಯನ್ನು ಹೆಚ್ಚಿಸುವುದು ಮೊದಲಾದ ಆರೋಗ್ಯ ಕರ ಪ್ರಯೋಜನಗಳಿವೆ.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ಚಿಕ್ಕ ಪ್ರಮಾಣದಲ್ಲಿ ತುಪ್ಪವನ್ನು ಪ್ರತಿ ಊಟದೊಂದಿಗೆ ಸೇವಿಸಿದರೆಜೀರ್ಣಕ್ರಿಯೆ ಸುಲಭಗೊಳ್ಳುತ್ತದೆ. ತುಪ್ಪ ಜೀರ್ಣಕ್ರಿಯೆಗೆ ಪ್ರಚೋದಕದ ರೂಪದಲ್ಲಿ ನೆರವಾಗುತ್ತದೆ.ಕೆಲವು ಸಂಶೋಧನೆಗಳ ಪ್ರಕಾರ ತುಪ್ಪದ ಸೇವನೆಯಿಂದ ಕ್ಯಾನ್ಸರ್ ಬೆಳವಣಿಕೆ ಕುಂಠಿತಗೊಳ್ಳುತ್ತದೆ. ಸಾಮಾನ್ಯವಾಗಿ ತುಪ್ಪವನ್ನು ನಿತ್ಯವೂ ಸೇವಿಸುತ್ತಾ ಬಂದಿರು ವವರಲ್ಲಿ ಕ್ಯಾನ್ಸರ್ ಪ್ರಮಾಣ ಅತಿ ಕಡಿಮೆ ಇರುವುದಕ್ಕೆ ಇದೇ ಕಾರಣವಿರಬಹುದು.

ತುಪ್ಪದ ಆರೋಗ್ಯಕರ ಪ್ರಯೋಜನಗಳ ವಿವರ:-

ರಾತ್ರಿ ಮಲಗುವ ಮುನ್ನ ಬಿಸಿಬಿಸಿ ಹಾಲಿಗೆ ಕೊಂಚವೇ ಕೊಂಚ ತುಪ್ಪವನ್ನು ಸೇರಿಸಿ ಕುಡಿಯುವ ಮೂಲಕ ಉತ್ತಮ ನಿದ್ದೆ ಬರುತ್ತದೆ ಹಾಗೂ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಬೆಳಿಗ್ಗೆ ಕಲ್ಮಶಗಳು ಸುಲಭವಾಗಿ ಹೊರ ಹೋಗಲು ಸಾಧ್ಯವಾಗುತ್ತದೆ. ಸ್ಮರಣಶಕ್ತಿ ಮತ್ತು ಬುದ್ದಿಮತ್ತೆ ಹೆಚ್ಚಲು ತುಪ್ಪ ನೆರವಾಗುತ್ತದೆ ಎಂದು ಬಹಳ ಹಿಂದಿಂದಲೂ ಭಾರತ ದಲ್ಲಿ ನಂಬಿಕೊಂಡು ಬರಲಾಗಿದೆ. ಇದೇ ಕಾರಣಕ್ಕೆ ವಿದ್ಯಾರ್ಥಿ ಗಳಿಗೆ ತುಪ್ಪದ ತಿಂಡಿಗಳನ್ನು ಆಗಾಗ ನೀಡಲಾಗುತ್ತಿತ್ತು. ಮೂಗಿನಿಂದ ರಕ್ತ ಬರುತ್ತಿದ್ದರೆ ವೈದ್ಯರಿಗೆ ತೋರಿಸುವ ಮೊದಲು ತುಪ್ಪವನ್ನು ಪ್ರಯೋಗಿಸಿ ಒಂದು ಕೈ ನೋಡಬಹುದು. ಇದಕ್ಕಾಗಿ ಕರಗಿದ ತುಪ್ಪವನ್ನು ಮೂಗಿನ ತುದಿ ಮತ್ತು ಹೊಳ್ಳೆಗಳ ಒಳಗೆ, ವಿಶೇಷವಾಗಿ ರಕ್ತ ಒಸರುವೆಡೆ ದಿನಕ್ಕೆ ಮೂರು ನಾಲ್ಕು ಬಾರಿಯಂತೆ ಎರಡರಿಂದ ಮೂರು ದಿನ ಹಚ್ಚಬೇಕು.

ಶುದ್ಧ ತುಪ್ಪವನ್ನು ಪರೀಕ್ಷಿಸುವುದು ಹೇಗೆ?

ಇಂದು ದುಬಾರಿ ತುಪ್ಪದೊಂದಿಗೆ ಅಗ್ಗದ ಡಾಲ್ಡಾವನ್ನು ಬೆರೆಸಿ ಮಾರಾಟ ಮಾಡುವ ಖದೀಮರಿದ್ದಾರೆ. ಆದರೆ ತುಪ್ಪವನ್ನು ತಕ್ಷಣ ಪರೀಕ್ಷಿಸಲು ಕೆಲವು ಸುಲಭ ವಿಧಾನಗಳಿವೆ.
ಶುದ್ಧ ತುಪ್ಪ ಬಿಸಿ ಅಂಗೈಯಲ್ಲಿ ತಕ್ಷಣ ಕರಗುತ್ತದೆ. ಇದಕ್ಕಾಗಿ ಎರಡೂ ಹಸ್ತಗಳನ್ನು ಸುಮಾರು ಇಪ್ಪತ್ತು ಸೆಕೆಂಡ್ ಉಜ್ಜಿ ತಕ್ಷಣ ಒಂದು ಚಿಕ್ಕ ಪ್ರಮಾಣದ ಗಟ್ಟಿ ತುಪ್ಪವನ್ನು ಕೈ ಮೇಲೆ ಇಟ್ಟಾಕ್ಷವೇ ಕರಗಲು ಪ್ರಾರಂಭವಾಗಬೇಕು. ಹಾಗೂ ಕೆಲವೇ ಸೆಕೆಂಡುಗಳಲ್ಲಿ ದ್ರವವಾಗಬೇಕು. ಒಂದು ವೇಳೆ ಕರಗಲು ಹೆಚ್ಚು ಸಮಯ ತೆಗೆದುಕೊಂಡರೆ ಇದು ಅಪ್ಪಟವಲ್ಲ ಎಂದು ಖಾತ್ರಿಯಾಗುತ್ತದೆ. ಹಿರಿಯರು ಪರೀಕ್ಷಿಸಲು ಇನ್ನೊಂದು ವಿಧಾನ ಅನು ಸರಿಸುತ್ತಿದ್ದರು. ಇದಕ್ಕೆ ಶುದ್ದ  ತುಪ್ಪದ ಪರಿಮಳ ನಿಮ್ಮ ನೆನಪಿನಲ್ಲಿರಬೇಕು. ಕೊಂಚ ತುಪ್ಪವನ್ನು ಹಸ್ತದ ಹಿಂಬದಿಗೆ ಸವರಿ ನಾಲ್ಕಾರು ಬಾರಿ ಉಜ್ಜಿ ಒರೆಸಿಬಿಡಬೇಕು. ಅಪ್ಪಟ ತುಪ್ಪವಾದರೆ ತುಪ್ಪದ ವಾಸನೆ ಹೆಚ್ಚು ಹೊತ್ತು ಉಳಿದಿರುತ್ತದೆ. ಡಾಲ್ಡಾ ಸೇರಿಸಿದ್ದರೆ ಈ ಪರಿಮಳ ಒಂದು ನಿಮಿಷದೊಳಗ ಖಾಲಿಯಾಗುತ್ತದೆ.

ಶುದ್ಧ ತುಪ್ಪವನ್ನು ಪರೀಕ್ಷಿಸುವ ವಿಧಾನ :-

 

ಶುದ್ಧ ತುಪ್ಪದ ಬಾಟಲಿಯ ಮೇಲ್ಭಾಗದಲ್ಲಿ ಕರಗಿದ್ದು ಇದರ ಕೊಂಚವೇ ಕೆಳಗೆ ತುಪ್ಪ ಮರಳು ಮರಳಾಗಿರುತ್ತದೆ. ಆದರೆ ಇದು ಹಸುವಿನ ಮತ್ತು ಎಮ್ಮೆ ಹಾಲಿನ ತುಪ್ಪದಲ್ಲಿ
ಎರಡರಲ್ಲೂ ಕಂಡುಬರುತ್ತದೆ. ಒಂದು ವೇಳೆ ಡಾಲ್ಡಾ ಬೆರೆಸಿದ್ದರೆ ಮೇಲ್ಭಾಗ ಕರಗುವುದಿಲ್ಲ, ಗಟ್ಟಿಯಾಗಿಯೇ ಇರುತ್ತದೆ. ಶುದ್ಧ ತುಪ್ಪದ ದೀಪ ಯಾವುದೇ ಚಿಟಿಪಿಟಿಯಿಲ್ಲದೇ ಉರಿಯುತ್ತದೆ. ತುಪ್ಪವನ್ನು ಹತ್ತಿಯ ಬತ್ತಿಗೆ ಸವರಿ ಬೆಂಕಿ ಕೊಟ್ಟು ಉರಿಸಿ ಸೂಕ್ಷ್ಮವಾಗಿ ಗಮನಿಸಿ. ಶುದ್ದ ತುಪ್ಪವಾದರೆ ಜ್ವಾಲೆ ನೇರವಾಗಿ, ಏಕಪ್ರಕಾರವಾಗಿ ಹೊಗೆಯಿಲ್ಲದೇ ಉರಿಯುತ್ತದೆ. ಡಾಲ್ಡಾ ಬೆರೆಸಿದ್ದರೆ ಜ್ವಾಲೆ ಕೊಂಚ ಚಿಟಿಪಿಟಿ ಎನ್ನುವುದು ಅಥವಾ ವೇಗವಾಗಿ ಚಿಕ್ಕದೊಡ್ಡದಾಗುವುದು ಮತ್ತು ಜ್ವಾಲೆಯ ತುದಿಯಲ್ಲಿ ಕೊಂಚ ಕಪ್ಪು ಹೊಗೆಯಂತಿರುವುದು ಕಂಡುಬರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…