News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

80

 ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ.

ಹಾಗಲಕಾಯಿಯ ಉಪಯೋಗಗಳು

ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ ಕೊಲೆಸ್ಟ್ರಾಲನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿ ಯನ್ನು ಹೆಚ್ಚಿಸುತ್ತದೆ  : ವೈರಸ ಮತ್ತು ಬ್ಯಾಕ್ಟೀರಿಯಾಗಳ ವಿರುದ್ದ ಹೋರಾಡುವ ಸಾಮಥ್ರ್ಯವನ್ನು ಹೊಂದಿರುವುದರಿಂದ ವಿವಿಧ ಅಲರ್ಜಿಯನ್ನು ತಡೆಗಟ್ಟಲು  ಸಹಾಯ ಮಾಡುತ್ತದೆ.

ಮಧುಮೇಹವನ್ನು ಕಡಿಮೆ ಮಾಡುತ್ತದೆ : ಪ್ರತಿದಿನ ಹಾಗಲಕಾಯಿ ಸೇವಿಸುವುದರಿಂದ ಮಧುಮೇಹಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.  ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.

ಮಲಬದ್ಧತೆಯನ್ನು ತಡೆಗಟ್ಟುತ್ತದೆ:  ಮಲಬದ್ದತೆಯನ್ನು ತಡೆಗಟ್ಟುವಲ್ಲಿ ಹಾಗಲಕಾಯಿ ನೈಸರ್ಗಿಕ ಪರಿಹಾರವಾಗಿದೆ.  ಯಾವದೇ ಅಡ್ಡ ಪರಿಣಾಮಗಳಿಲ್ಲ.

ಚರ್ಮ  ಮತ್ತು ಕೂದಲಿನ  ಕಾಂತಿಗಾಗಿ: ಚರ್ಮದ ಮೇಲಿನ ಮಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುವಲ್ಲಿ ಆಂಟಿ ಆಕ್ಸಿಡೆಂಟಗಳು ಮತ್ತು ವಿಟಮಿನ್ ಸಿ ಮತ್ತು ಎ ಸಹಾಯ ಮಾಡುತ್ತದೆ. ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ತೂಕ ಕಡಿಮೆ ಮಾಡುತ್ತದೆ ಕ್ಯಾಲೋರಿ, ಕೊಬ್ಬು ಮತ್ತು ಕಾರ್ಬೋಹೈಡ್ರೇಟಗಳು ಕಡಿಮೆ ಇರುವುದರಿಂದ ತೂಕ ಇಳಿಸುವಲ್ಲಿ ಆಹಾರದಲ್ಲಿ ಸೇರಿಸಲಾಗುತ್ತದೆ.

ಕಣ್ಣಿನ ದೃಷ್ಟಿ  ಹೆಚ್ಚಿಸುತ್ತದೆ: ಇದರಲ್ಲಿನ ಬೀಟಾ ಕ್ಯಾರೋಟಿನ್ ಮತ್ತು ಜೀವಸತ್ವ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅವಶ್ಯಕವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ರಕ್ತವನ್ನು ಶುದ್ಧಿಕರಿಸುತ್ತದೆ ಪ್ರತಿದಿನ ಬೆಳೆಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸ ಸೇವಿಸುವುದರಿಂದ ರಕ್ತ ಶುದ್ಧಿಗೊಳ್ಳುತ್ತದೆ.

ಕ್ಯಾನ್ಸರ್ನಿಂದ ಕಾಪಾಡುತ್ತದೆ

ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….