ಸುದ್ದಿ

ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

78

ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ.

ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ.

ಕೋಲಾರದಲ್ಲಿ ಈ ಪ್ರಕರಣ ನಡೆದಿದ್ದು, ಟ್ಯೂಬರ್ಗ್ ಬಿಯರ್‍ಗೆ ಕಲಬೆರಕೆ ಮಾಡಲಾಗಿದೆ. ಇದನ್ನು ಕಂಡ ಗ್ರಾಹಕರು ಗಾಬರಿಯಾಗಿದ್ದು, ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಿ ಬಾರ್ ಅಥವಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಅಬಕಾರಿ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಘಟನೆ ನಂತರ ಅಬಕಾರಿ ಸಬ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗ್ರಾಹಕರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…