ಸುದ್ದಿ

ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

78

ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ.

ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ.

ಕೋಲಾರದಲ್ಲಿ ಈ ಪ್ರಕರಣ ನಡೆದಿದ್ದು, ಟ್ಯೂಬರ್ಗ್ ಬಿಯರ್‍ಗೆ ಕಲಬೆರಕೆ ಮಾಡಲಾಗಿದೆ. ಇದನ್ನು ಕಂಡ ಗ್ರಾಹಕರು ಗಾಬರಿಯಾಗಿದ್ದು, ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಿ ಬಾರ್ ಅಥವಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಅಬಕಾರಿ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಘಟನೆ ನಂತರ ಅಬಕಾರಿ ಸಬ್ ಇನ್ಸ್‍ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಗ್ರಾಹಕರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.