ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.
ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?
ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.
ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.
ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ
ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.
ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?
ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.
ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…