ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.
ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?
ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.
ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.
ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ
ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.
ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?
ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.
ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.