ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.
ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.
ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?
ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.
ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.
ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ
ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.
ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?
ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.
ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…