ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…
ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.
ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.
ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.
ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.
ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ
ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…