ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…
ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.
ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.
ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.
ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.
ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ
ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…