News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

4041

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…