ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…
ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.
ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.
ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.
ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.
ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.
ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ
ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.