ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.