ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.
ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.
* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.
* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…