ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….