ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?
ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.
ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.
ಕ್ರಮೇಣ ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.
ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.
ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ
* ಲಿಂಬೆ ರಸ – ಒಂದು ದೊಡ್ಡ ಚಮಚ
* ಉಪ್ಪು- ಎರಡು ಚಿಕ್ಕ ಚಮಚ
ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.
ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.
* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.
* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್ನಿಂದ ಒರೆಸಿಕೊಳ್ಳಿ.
* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.
* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.
* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.
* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.
* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.
* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…