News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಆಧ್ಯಾತ್ಮ

ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

1821

ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

ಹಿಂದೂ ಧರ್ಮ ನಮಗೆ ಸಾಟಿಯಿಲ್ಲದ ಪರಿಣತಿಯೊಂದಿಗೆ ಕಲೆ, ಸಾಹಿತ್ಯ ಮತ್ತು ವಾಸ್ತುಶಿಲ್ಪ  ಉದಾಹರಣೆಗೆ: ಪುರಾತನ ರಾಜ್ಯಗಳ ದೇವಾಲಯಗಳು, ಅರಮನೆಗಳು, ಇತ್ಯಾದಿ – ಈ ಕೊಡುಗೆಗಳು ಕೇವಲ ವಿಶ್ವಾಸಾರ್ಹ ದೃಢೀಕರಣಗಳಾಗಿವೆ. ಬನ್ನಿ ಹಿಂದೂಧರ್ಮದ ಬಗ್ಗೆ ಇರುವ ಕುತೂಹಲಕಾರಿ ಸಂಗತಿಗಳ ಬಗ್ಗೆ ಮುಂದೆ ತಿಳಿಯೋಣ…

ಸಾಧು ಸಂತರು 

ಭಾರತದೇಶವು ಸಾಧುಸ೦ತರುಗಳ ನೆಲೆವೀಡಾಗಿದ್ದು, ಇವರ ಪೈಕಿ ಅತ್ಯ೦ತ ಭಯವನ್ನು ಹುಟ್ಟಿಸುವ ಆದರೆ ಅಷ್ಟೇ ಗೌರವಾದರಗಳಿಗೂ ಪಾತ್ರರಾಗಿರುವ ಒ೦ದು ಸಾಧುವರ್ಗವೆ೦ದರೆ ಅದು ಅಘೋರಿ ಸಾಧುಗಳ ಪ೦ಗಡವಾಗಿದೆ.

ತಮ್ಮ ಧಾರ್ಮಿಕ ಜೀವನದ ಒ೦ದು ಭಾಗವಾಗಿ ಈ ಅಘೋರಿ ಸಾಧುಗಳು ಕೈಗೊಳ್ಳುವ ವಿಕ್ಷಿಪ್ತ ಹಾಗೂ ಭಯಾನಕ ವಿಧಿವಿಧಾನಗಳು ಕುಖ್ಯಾತವಾಗಿದ್ದು, ಇವು ಜನಸಾಮಾನ್ಯರಲ್ಲಿ ಕುತೂಹಲವನ್ನೂ ಹಾಗೂ ಪರಮಾಶ್ಚರ್ಯವನ್ನೂ ಉ೦ಟುಮಾಡುವ೦ತಹವುಗಳಾಗಿವೆ.

ಕಷ್ಟ ಕಾರ್ಪಣ್ಯಗಳಿಗೆ ಗಾಯತ್ರಿ ಮಂತ್ರದ ಪಠಣ

ಗಾಯತ್ರಿ ಮ೦ತ್ರ ಪಠಣಕ್ಕಾಗಿ ಎರಡನೆಯ ಸೂಕ್ತ ಸಮಯವೆ೦ದರೆ ಅದು ಮಧ್ಯಾಹ್ನದ ಅವಧಿಯಾಗಿದೆ. ಮೂರನೆಯ ಬಾರಿ ಗಾಯತ್ರಿ ಮ೦ತ್ರವನ್ನು ಪಠಿಸಲು ಸೂಕ್ತ ಸಮಯವೆ೦ದರೆ ಸೂರ್ಯಾಸ್ತಮಾನಕ್ಕಿ೦ತ ಮೊದಲು ಆರ೦ಭಗೊ೦ಡು ಸ೦ಪೂರ್ಣ ಸೂರ್ಯಾಸ್ತದವರೆಗೂ ಮು೦ದುವರಿಸಬೇಕು. ಈ ಮೂರು ಸಮಯಗಳನ್ನು ಹೊರತುಪಡಿಸಿ, ಬೇರೆ ಅವಧಿಯಲ್ಲಿ ಮ೦ತ್ರವನ್ನು ಪಠಿಸಲು ಬಯಸುವಿರಾದರೆ, ಪಠಿಸುವವರು ಮನಸ್ಸಿನಲ್ಲಿಯೇ ಮೌನವಾಗಿ ಪಠಿಸಿದರೆ ಸಂಪೂರ್ಣ ಕಷ್ಟ ಕಾರ್ಪಣ್ಯಗಳಿಂದ ಮುಕ್ತರಾಗುವಿರಿ ಎನ್ನುವ ನಂಬಿಕೆ ಇದೆ. ಇಲ್ಲಿ ಓದಿ:-ಹಿಂದೂ ಧರ್ಮದಲ್ಲಿ ಯಾರಾದ್ರೂ ಸತ್ತರೆ, ಕೇಶ ಮುಂಡನ ಮಾಡಿಸುತ್ತಾರೆ…ಏಕೆ ಗೊತ್ತಾ???

ರುದ್ರಾಕ್ಷ

ಭಗವಾನ್ ಶಿವನ ಸ೦ಕೇತವಾಗಿರುವ ರುದ್ರಾಕ್ಷವನ್ನು ಕೇವಲ ತಮ್ಮ ಬಳಿ ಇರಿಸಿಕೊಳ್ಳುವುದರಿ೦ದ ಅಥವಾ ಧರಿಸಿಕೊಳ್ಳುವುದರಿ೦ದ ಜನರ ಬಹುತೇಕ ಕಷ್ಟಕೋಟಲೆಗಳ ನಿವಾರಣೆಯಾಗುತ್ತದೆ ಹಾಗೂ ಅವರ ಕೋರಿಕೆಗಳು ಈಡೇರುತ್ತವೆ.

ದೇವರ ಪ್ರತಿಮೆ

ಪ್ರತಿಮೆಯು ಯಾವುದೇ ದೃಷ್ಟಿಕೋನದಿ೦ದಲೂ ದೇವರಲ್ಲ. ಪ್ರತಿಮೆಯು ಅಮೂರ್ತವಾಗಿರುವ ದೈವಸ್ವರೂಪದ ಮೂರ್ತರೂಪವಾಗಿದೆ. ದೇವರ ವ್ಯಕ್ತ ಅಥವಾ ಮೂರ್ತಿರೂಪದ ಈ ಪ್ರತಿಮೆಯು ಮಾನವರಿಗೆ ದೇವರ ಕುರಿತ ರೂಪ ಧ್ಯಾನವನ್ನು ಕೈಗೊಳ್ಳಲು ನೆರವಾಗುತ್ತದೆ ಹಾಗೂ ಭಗವತ್ ಸಾಕ್ಷಾತ್ಕಾರದ ಮು೦ದಿನ ಹೆಜ್ಜೆಗೆ ಸಹಾಯವಾಗುತ್ತದೆ.

 ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆ

ಆತ್ಮಗಳು ಹಿಂದೂ ಧರ್ಮದಲ್ಲಿ ಆತ್ಮಗಳ ಪರಿಕಲ್ಪನೆಯನ್ನು ಬಹಳವಾಗಿ ಚರ್ಚೆಮಾಡಲಾಗುತ್ತದೆ. ಹಿಂದೂಧರ್ಮದ ಪ್ರಕಾರ, ಪ್ರಪಂಚದಲ್ಲಿರುವ ಎಲ್ಲಾ ಜೀವಿಗಳು ಆತ್ಮವನ್ನು ಹೊಂದಿರುತ್ತವೆ ಮತ್ತು ಹೆಚ್ಚಿನ ಶಕ್ತಿಮಟ್ಟದಲ್ಲಿರುವ ದೇಹಗಳನ್ನು ಉತ್ತಮ ಸಾಮರ್ಥ್ಯವಿರುವ ಆತ್ಮಗಳನ್ನು ಹೊಂದಿರುತ್ತವೆ ಎಂದು ನಂಬಲಾಗಿದೆ.

ಓಂ ಮಹಾ ಮಂತ್ರ 

ಎನ್ನುವ ಮಂತ್ರ ಅತ್ಯಂತ ಪ್ರಬಲ ಮಂತ್ರ ಮತ್ತು ಅದನ್ನು ಪಠಿಸಿದಾಗ ಸರ್ವೋಚ್ಛ ಜ್ಞಾನ ಪ್ರಕಟವಾಗುತ್ತದೆ. ಓಂಕಾರದ ಪಠನೆಯಿಂದಾಗುವ ಪ್ರತಿಧ್ವನಿಗಳು ಹೆಚ್ಚು ನಿಗೂಢವಾಗಿರುತ್ತದೆ ಮತ್ತು ಪರಿಸರದ ಮೇಲೆ ತರಂಗಗಳ ಪರಿಣಾಮವುಂಟಾಗುತ್ತವೆ.

ಘ೦ಟೆಗಳ ನಿನಾದ

ದೇವಸ್ಥಾನಗಳ ಘ೦ಟೆಗಳು ಸಾಮಾನ್ಯವಾದ ಲೋಹಗಳಿ೦ದ ಮಾಡಲ್ಪಟ್ಟಿರುತ್ತವೆ. ದೇವಸ್ಥಾನದ ಘ೦ಟೆಗಳು ಕ್ಯಾಡ್ಮಿಯ೦, ಸತು, ಸೀಸ, ತಾಮ್ರ, ನಿಕ್ಕಲ್, ಕ್ರೋಮಿಯ೦, ಹಾಗೂ ಮ್ಯಾ೦ಗನೀಸ್ ನ೦ತಹ ವಿವಿಧ ಲೋಹಗಳ ಮಿಶ್ರಣದಿ೦ದ ಮಾಡಲ್ಪಟ್ಟಿರುತ್ತವೆ.

ದೇವಸ್ಥಾನದ ಇ೦ತಹ ಘ೦ಟೆಯನ್ನು ತಯಾರಿಸಲು ಬಳಸಲಾಗುವ ವಿವಿಧ ಲೋಹಗಳ ಅನುಪಾತದಲ್ಲಿ ವಿಜ್ಞಾನವು ಅಡಗಿದೆ. ಘ೦ಟೆಯ ತಯಾರಿಕೆಯಲ್ಲಿ ಬಳಸಲಾಗುವ ಪ್ರತಿಯೊ೦ದು ಘಟಕ ಲೋಹವನ್ನೂ ಸಹ ಯಾವ ತೆರನಾಗಿ, ಯಾವ ಪ್ರಮಾಣದಲ್ಲಿ ಮಿಶ್ರಗೊಳಿಸಿರುತ್ತಾರೆ೦ದರೆ, ಘ೦ಟೆಯ ಸದ್ದು ಮೊಳಗಿದಾಗ, ಘ೦ಟೆಯ ತಯಾರಿಕೆಯಲ್ಲಿ ಬಳಸಲಾದ ಪ್ರತಿಯೊ೦ದು ಲೋಹವೂ ಕೂಡ ವಿಶಿಷ್ಟವಾದ, ತನ್ನದೇ ಆದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಗಳ ಸ೦ಯೋಜನೆಯು ಎಡ ಹಾಗೂ ಬಲಭಾಗದ ಮೆದುಳುಗಳ ನಡುವೆ ಸಾಮರಸ್ಯವನ್ನು ಮೂಡಿಸುತ್ತದೆ.

ಆದ್ದರಿ೦ದ, ಘ೦ಟೆಯ ಸಪ್ಪಳವು೦ಟಾದ ಕೂಡಲೇ, ಘ೦ಟೆಯು ತೀಕ್ಷ್ಣವಾದ ಹಾಗೂ ದೀರ್ಘವಾದ ಧ್ವನಿಯನ್ನು ಹೊರಡಿಸುತ್ತದೆ ಹಾಗೂ ಈ ಧ್ವನಿಯು ಹಲವು ಸೆಕೆ೦ಡುಗಳ ಕಾಲ ಹಾಗೆಯೇ ಮು೦ದುವರಿಯುತ್ತದೆ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…