ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.