ವ್ಯಕ್ತಿ ವಿಶೇಷಣ

ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

404

ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.

ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :

ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

ಪ್ರಶಸ್ತಿ ಸನ್ಮಾನಗಳು:-

  • ಕಿಟ್ಟೆಲರಿಗಿದ್ದ ಕನ್ನಡ – ಇಂಗ್ಲಿಷ್ ಜ್ಞಾನ,ಪಾಂಡಿತ್ಯವನ್ನು ಗಮನಿಸಿದ ಜರ್ಮನಿಯ ಟ್ಯುಬಿಂಗನ್ ವಿಶ್ವ ವಿದ್ಯಾನಿಲಯ, ಜೂನ್, ೬, ೧೮೯೬ ರಲ್ಲಿ ಅವರಿಗೆ ” ಡಾಕ್ಟರೇಟ್ ” ಕೊಟ್ಟು ಆದರಿಸಿತು.
  • ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಸಂಸ್ಥೆ ಯ ವತಿಯಿಂದ ಗೌರವ [೧೮೯೦] ಸದಸ್ಯತ್ವವನ್ನು ಕೊಡಲಾಯಿತು. ಕನ್ನಡ ಭಾಷೆಯನ್ನು ಬೆಳೆಸಲು ಒಬ್ಬ ವಿದೇಶಿ ಪಾದ್ರಿ ಮಾಡಿದ ಸಾಧನೆ, ಒಂದು ಅಪೂರ್ವ ಸಂಗತಿಯಾಗಿದೆ.

ಮರಣ ಶತಮಾನೋತ್ಸವ ಆಚರಣೆ:-

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

    ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…