ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…