ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…