ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.