ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ– ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.
ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :–
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….