ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್ ತಜ್ಞರ ಸಹಾಯದಿಂದ ಅಶ್ಲೀಲ ವೆಬ್ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್ ಟೀವಿ ಮೂಲಕ ಅಶ್ಲೀಲ ವೆಬ್ಸೈಟ್ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್ಸೈಟ್ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್ಲೋಡ್ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್ ಅವರು ಅಶ್ಲೀಲ ವೆಬ್ಸೈಟ್ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್ ಟೀವಿಯನ್ನು ಕಂಪ್ಯೂಟರ್ ರೀತಿ ಹ್ಯಾಕ್ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್ಲೈನ್ಗೆ ಅಪ್ಲೋಡ್ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್ ಅವರು ಸೈಬರ್ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.
ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್ಲೈನ್ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.