inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

46
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.