inspirational

ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

70
Heart attack

ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆ
ಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ.

ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದ ಸಿಂಥೇಜಿಕ್ ಡಿಸ್ಟಾರ್ಜ್ ಅಂದರೆ ಅಡ್ರಿನಾಲಿನ್ ಪಂಪಿಂಗ್ ಅಧಿಕವಿರುತ್ತದೆ. ಇದರಿಂದಾಗಿ ಹೃದಯದ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಅದು ಹೆಚ್ಚು ಕಠಿಣವಾಗಿ ಕೆಲಸದಲ್ಲಿ ತೊಡಗುವಂತಾಗುತ್ತದೆ. ಹೃದಯಾಘಾತ ಸಂಭವಿಸುವ ಸಾಧ್ಯತೆಯುಳ್ಳ ಅಥವಾ ಈಗಾಗಲೇ ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿರುವವರಲ್ಲಿ ಹೃದಯಾಘಾತದ ಪ್ರಮಾಣ ಇನ್ನೂ ಹೆಚ್ಚು. 

ಅಲ್ಲದೆ, ಚಳಿಗಾಲದಲ್ಲಿ ಸಂಭವಿಸುವ ಹೃದಯಾಘಾತ ಹೆಚ್ಚು ಗಂಭೀರ ಸ್ವರೂಪದ್ದಾಗಿರುತ್ತದೆ. ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆ ಗಟ್ಟಿಯಾಗುವುದನ್ನು ಗಮನಿಸಿದ್ದೀರಿ. ರಕ್ತದ ಚಲನೆ ಕಡಿಮೆಯಾಗಿ ಕೊಬ್ಬು ಅಧಿಕವಿದ್ದರೆ ಇಂಥ ಅಪಾಯ ದೇಹದೊಳಗೂ ಸಂಭವಿಸೀತು!

Heart problems

ಹೃದಯದ ಹೊರಗೆ ಗೋಡೆಗಳಲ್ಲಿ ಸೂಕ್ಷ್ಮತಿಸೂಕ್ಷ್ಮ ಕಿರುನಾಳಗಳಲ್ಲಿ ರಕ್ತ ಪ್ರವಾಹ ನಿರಂತರವಾಗಿರಬೇಕು. ಆದರೆ, ಚಳಿಯ ದಿನಗಳಲ್ಲಿ ಇದು ಸಾಧ್ಯವಾಗದೆ ಹೋಗಬಹುದು. ಕಿರುನಾಳಗಳ ಒಳಪದರ ಕಿರಿದಾಗಿದ್ದರೆ, ಕೊಬ್ಬಿನ ಕರಣೆ ಕಟ್ಟಿದರಂತೂ ಸಂಚಾರ ಕಠಿಣ. ಆಗಲೂ ಹೃದಯಾಘಾತ ಕಟ್ಟಿಟ್ಟ ಬುತ್ತಿ. ರೋಗಿಗೆ ಶೇ.30 ಮಾರ್ಗ ಕಿರಿದಾಗಿದೆ ಎಂದರೆ, ಅದು ಉಳಿದ ದಿನಗಳಂತಲ್ಲ. ಚಳಿಯಲ್ಲಿ ಅದು ಶೇ.70ಕ್ಕೆ ಸಮ!

ಹೃದಯಾಘಾತ ಸಂಭವಿಸಿದ ಕ್ಷಣಗಳಲ್ಲಿ ಹೃದಯ ಬಡಿತದ ಮೇಲೆ ವಾತಾವರಣದಲ್ಲಿ ಆಗುವ ಏರುಪೇರುಗಳೂ ಪ್ರಭಾವ ಬೀರುತ್ತವೆ. ‘ಡಿ’ ಜೀವಸತ್ವದ ಕೊರತೆಯೂ ಹಾರ್ಟ್ ಅಟ್ಯಾಕ್‌ಗೆ ಕಾರಣ ಆಗಬಹುದು. ಸೂರ್ಯನ ಕಿರಣ ‘ಡಿ’ ಜೀವಸತ್ವದ ಆಕರ. ಚಳಿಗಾಲದಲ್ಲಿ ಮನೆಯೊಳಗೇ ಇದ್ದರೆ, ದೇಹದಲ್ಲಿ ವಿಟಮಿನ್ ‘ಡಿ’ ಉತ್ಪಾದನೆ ಕಡಿಮೆಯಾಗುತ್ತದೆ. ವೈದ್ಯವಿಜ್ಞಾನದ ಸಂಶೋಧನೆಗಳ ಪ್ರಕಾರ, ಎತ್ತರ ಪ್ರದೇಶಗಳ ಜನರಿಗೆ ಹೃದಯಾಘಾತದ ರಿಸ್ಕ್ ಕಡಿಮೆಯಂತೆ. 

ಏಕೆಂದರೆ ಎತ್ತರಕ್ಕೆ ಹೋದಂತೆ ಸೂರ್ಯನ ಕಿರಣಗಳಲ್ಲಿನ ಅಲ್ಟ್ರಾವೈಲೆಟ್ ಪ್ರಮಾಣ ಹೆಚ್ಚಿ, ವಿಟಮಿನ್ ‘ಡಿ’ ಉತ್ಪಾದನೆ ಪ್ರಮಾಣವೂ ಅಧಿಕವಾಗುತ್ತದೆ. ಈ ಕಾರಣದಿಂದಲೇ ರಕ್ತದೊತ್ತಡ ಇಲ್ಲದ, ಕೊಲೆಸ್ಟೆರಾಲ್ ಕಡಿಮೆ ಇರುವ ಕೆಳ ಪ್ರದೇಶದ ಜನರಲ್ಲೂ ಹೃದಯಾಘಾತದ ಪ್ರಮಾಣ ಅಧಿಕವಿರುತ್ತದೆ!

ಚಳಿಗಾಲದಲ್ಲಿ ಎಲ್ಲರೂ ಆಲಸಿಗಳೇ.
ಮಧುಮೇಹ ರೋಗವು ಈ ಕಾಲದಲ್ಲಿ ಉಲ್ಬಣಿಸುತ್ತದೆ. ಸ್ಥೂಲ ಕಾಯಗಳನ್ನು ಕಂಡರೆ ಹೃದಯಾಘಾತಕ್ಕೆ ಎಲ್ಲಿಲ್ಲದ ಪ್ರೀತಿ! ಚಳಿಗಾಲದಲ್ಲಿ ಸಾಮಾನ್ಯವಾಗಿ ಹಸಿವು ಹೆಚ್ಚಾಗುತ್ತದೆ. ವೈರಸ್‌ಗಳು ಹೆಚ್ಚು ಕ್ರಿಯಾಶೀಲಗೊಳ್ಳುವುದೂ ಇದೇ ವೇಳೆಯೇ. ಚಳಿಯಲ್ಲಿ ಕುರುಕಲು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಇದೂ ಹೃದಯದ ಆರೋಗ್ಯಕ್ಕೆ ಮಾರಕ ಆಗಬಹುದು.

ಹೃದಯಾಘಾತ

ಆಘಾತ ತಪ್ಪಿಸಲು ಇಷ್ಟು ಮಾಡಿ
– ತೀರಾ ನಸುಕಿನಲ್ಲಿ ವಾಕಿಂಗ್‌ಗೆ ಹೋಗಬೇಡಿ. ಹಾಗೆಂದು ಸುಮ್ಮನೆ ಹೊದ್ದು ಮಲಗ್ಬೇಡಿ.
– ಚಳಿಗಾಲದಲ್ಲಿ ಹೆಚ್ಚು ಆ್ಯಕ್ಟಿವ್ ಇರಿ.
– ಬೆಚ್ಚಗಿನ ಬಟ್ಟೆ ಧರಿಸಿ.
– ಬಿಪಿ, ಶುಗರ್ ಕಂಟ್ರೋಲ್‌ನಲ್ಲಿರಲಿ.
– ಶ್ವಾಸಕೋಶದ ಸಮಸ್ಯೆ ಕಂಡು ಬಂದಲ್ಲಿ, ಸೂಕ್ತ ಚಿಕಿತ್ಸೆ ಪಡೆಯಿರಿ..
– ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣವೇ ವೈದ್ಯರನ್ನು ಭೇಟಿಯಾಗಿ.
– ಲಘು ಆಹಾರ ಸೇವಿಸಿ. ಕೊಬ್ಬು ಹೆಚ್ಚಿರುವ, ಮದ್ಯ, ಧೂಮಪಾನ ವರ್ಜಿಸಿ. 
– ಕೋಣೆಯೊಳಗೆ ತಣ್ಣನೆ ಗಾಳಿ ಸುಳಿಯದಂತೆ ಎಚ್ಚರ ವಹಿಸಿ. 

Published by

Mayoon N / Biotechnologist / Director of DRM Career Build Center, Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬುದ್ಧನ ಕಾಲದ ಈ ಮಹಾನ್ ಚಿಂತಕ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ!ಆ ಮಹಾನ್ ಚಿಂತಕ ಯಾರು ಗೊತ್ತಾ?

    ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.