ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.
ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.
ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.
ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.
ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.
*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.
ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.
ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.
ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.
ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.
ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.
*ಪೂಜಾ ವಿಧಾನ:*
ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.
ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.
ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.