ಆಧ್ಯಾತ್ಮ

ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

1013

ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

 

ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.

ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.

ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.

ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.

ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.

*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.

ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.

ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.

ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.

ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.

ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.

*ಪೂಜಾ ವಿಧಾನ:*

ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.

ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.

ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….