ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.
ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.
ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.
ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.
ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.
*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.
ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.
ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.
ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.
ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.
ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.
*ಪೂಜಾ ವಿಧಾನ:*
ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.
ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.
ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…