ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.
ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.
ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.
ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.
ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.
ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.
ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.
ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…