ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು.

ಗಂಡ ಕಿಟಕಿಯಿಂದ ಹೊರಗೆ ಬಾನಿನತ್ತ ನೋಡುತ್ತಾ ಅವನನ್ನು ಮಹಾ ತುಂಟನನ್ನಾಗಿ ಬೆಳೆಸುತ್ತೇನೆ. ಅವನು ಚೆನ್ನಾಗಿ ಈಜಬೇಕು. ಸೈಕಲ್ ಹೊಡೆಯ ಬೇಕು. ಮರ ಹತ್ತಬೇಕು. ಕ್ರಿಕೆಟ್ ಆಡಬೇಕು. ಕರಾಟೆ ಕಲಿಯಬೇಕು. ಬೆಟ್ಟಗುಡ್ಡ ಹತ್ತಬೇಕು. ಬೈಕ್ ಓಡಿಸಬೇಕು. ನಕ್ಷತ್ರ ವೀಕ್ಷಣೆಯನ್ನು ಮಾಡಿಸ ಬೇಕು. ಲೆಕ್ಕವನ್ನು ಚೆನ್ನಾಗಿ ಕಲಿಸಬೇಕು. ಗಿಟಾರ್ ನುಡಿಸೋಕೆ ಬರಬೇಕು. ಹಾಡೋಕ್ ಕಲಿತ್ರೆ ಇನ್ನೂ ಚೆನ್ನಾಗಿರುತ್ತೆ ಎಂದ.

ಗಂಡ ಇನ್ನೂ ಮಗನಿಗೆ ಕಲಿಸಬೇಕಾದ ಪಟ್ಟಿಯನ್ನು ಮುಂದುವರೆಸುತ್ತಿದ್ದನೋ ಏನೋ?. ಹೆಂಡತಿಯು ಮಧ್ಯೆ ತಲೆಹಾಕಿದಳು. ಸರಿ, ಹೆಣ್ಣು ಮಗು ಹುಟ್ಟಿದರೆ ಅವಳಿಗೇನು ಕಲಿಸುತ್ತೀರಿ? ಕುತೂಹಲದಿಂದ ಕೇಳಿದಳು. ಹೆಣ್ಣು ಮಗಳೆ? ಹೆಣ್ಣು ಮಗಳು ಹುಟ್ಟಿದರೆ ಅವಳಿಗೆ ನಾನ್ಯಾಕೆ ಕಲಿಸಬೇಕು? ಎಂದ ಗಂಡ. ಆಘಾತವಾಯಿತು ಹೆಂಡತಿಗೆ. ಅವಳಿಗರಿವಿಲ್ಲದಂತೆಯೇ ಕಣ್ಣಿನಲ್ಲಿ ನೀರು ಉಕ್ಕಿತು. ಯಾಕ್ರಿ ನಮಗೆ ಗಂಡು ಮಗು ಹೆಣ್ಣು ಮಗು ಎರಡೂ ಒಂದೇ ಅಲ್ವ. ಹೆಣ್ಣು ಮಗುವಿಗೆ ಯಾಕೆ ಏನನ್ನೂ ಕಲಿಸಲ್ಲ! ಎಂದಳು.

ಗಂಡನು ನಗುತ್ತಾ, ಅಯ್ಯೋ.. ಹೆಣ್ಣು ಮಕ್ಕಳಿಗೆ ನಾವು ಏನೂ ಕಲಿಸಬೇಕಾಗಿಲ್ಲ ಕಣೆ. ಅವರಿಗೆ ಅದು ದೈವದತ್ತವಾಗಿ ಬಂದಿರು ತ್ತದೆ ಎಂದನು. ಅರ್ಥವಾಗಲಿಲ್ಲ. ಬಿಡಿಸಿ ಹೇಳಿ ಎಂದಳು ಹೆಂಡತಿ. ಹೆಣ್ಣು ಮಗಳಿಗೆ ನಾವು ಕಲಿಸಬೇಕಾಗಿಲ್ಲ. ಅವಳು ನಮಗೆ ಎಲ್ಲವನ್ನೂ ಕಲಿಸುತ್ತಾಳೆ. ನಾನು ಹೇಗೆ ಬಟ್ಟೆ ಹಾಕ್ಕೋಬೇಕು, ಏನನ್ನು ತಿನ್ನಬೇಕು, ಹೇಗೆ ತಿನ್ನಬೇಕು, ಏನನ್ನು ಮಾತಾಡಬೇಕು, ಏನನ್ನು ಮಾತನಾಡಬಾರದು, ಎಲ್ಲಿಗೆ ಹೋಗಬೇಕು, ಎಷ್ಟು ಹೊತ್ತಿಗೆಲ್ಲ ಮನೆಗೆ ಬರಬೇಕು. ಒಟ್ಟಿನಲ್ಲಿ ಹೇಳುವುದಾದರೆ ಅವಳು ನನಗೆ ಎರಡನೆಯ ಅಮ್ಮನಾಗಿಬಿಡುತ್ತಾಳೆ. ಮಗಳಿಗೆ ತಂದೆಯೇ ಹೀರೋ!. ನಾನು ಬದುಕಿನಲ್ಲಿ ಏನನ್ನೂ ಸಾಧಿಸದಿದ್ದರೂ ಅವಳ ಪಾಲಿಗೆ ನಾನೇ ಹೀರೊ. ಅವಳಿಗೆ ಏನನ್ನಾದರೂ ಕೊಡಿಸಲಾಗದಿದ್ದರೆ, ಅವಳೇ ನನಗೆ ಸಮಾಧಾನ ಹೇಳಿ ಮುಂದಿನ ತಿಂಗಳು ಕೊಡಿಸುವಿಯಂತೆ ಬಿಡಪ್ಪ ಎನ್ನುತ್ತಾಳೆ.

ಅವಳ ಮನಸ್ಸಿನಲ್ಲಿ ತನ್ನ ಅಪ್ಪನಂತಹ ಗಂಡ ಸಿಗಬೇಕು ಎನ್ನುವ ಆಸೆ ಸುಪ್ತವಾಗಿ ಬೆಳೆಯುತ್ತಿರುತ್ತದೆ. ಅವಳಿಗೆ ಮಕ್ಕಳು ಮೊಮ್ಮೊಕ್ಕಳಾದರೂ, ನಾನು ಮಾತ್ರ ಅವಳನ್ನು ಮುದ್ದು ಪುಟಾಣಿಯಂತೆ ಮಾತನಾಡಿಸಬೇಕು, ನೋಡಿಕೊಳ್ಳಬೇಕು, ಮುದ್ದು ಮಾಡಬೇಕು. ಅವಳು ಬೆಳೆಯುವುದೇ ಇಲ್ಲ.

ಅಪ್ಪನ ಮನಸ್ಸನ್ನು ನೋಯಿಸುವವರನ್ನು ಅವಳು ಯಾವ ಕಾರಣಕ್ಕೂ ಕ್ಷಮಿಸಲ್ಲ. ಓ ಮಗಳು ಮಾತ್ರ ನಿಮ್ಮನ್ನು ನೋಡ್ಕೋತಾಳ? ಮಗ ನೋಡ್ಕಳ್ಳಲ್ಲ ಅಂತ ನಿಮ್ಮ ಅಭಿಪ್ರಾಯಾನ? ಇಲ್ಲ ಇಲ್ಲ. ಗಂಡು ಮಕ್ಕಳೂ ನೋಡ್ಕೋತಾರೆ. ಆದರೆ ಅವರಿಗೆ ನಾವೇ ಎಲ್ಲವನ್ನೂ ಕಲಿಸಬೇಕು. ಹೆಣ್ಣು ಮಕ್ಕಳಿಗೆ ಯಾರೂ ಕಲಿಸಬೇಕಾಗಿಲ್ಲ. ಎಲ್ಲ ಹುಟ್ಟಿನೊಡನೆಯೇ ಬಂದಿರುತ್ತದೆ ಎಂದನು ಗಂಡ.
ಇರಬಹುದು ರೀ, ಆದರೆ ಅವಳು ಒಂದಲ್ಲ ಒಂದು ದಿನ ನಮ್ಮನ್ನೆಲ್ಲ ಬಿಟ್ಟು ಗಂಡನ ಮನೆಗೆ ಹೋಗಲೇಬೇಕಲ್ಲವೆ? ವಿಷಾದದಿಂದ ನುಡಿದಳು ಹೆಂಡತಿ. ಹೂಂ, ಹೋಗಲೇಬೇಕು. ಆದರೆ, ನಾವು ಸದಾ ಅವಳ ಹೃದಯದಲ್ಲಿ ಬೆಚ್ಚಗೆ ಇರುತ್ತೇವೆ. ಸದಾ ಕಾಲಕ್ಕೂ! ಎಂದನು. ಗಂಡನ ಕಣ್ಣಂಚು ತುಸು ತೇವವಾಗಿತ್ತು.
ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…