ಸುದ್ದಿ

ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

44

ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.

ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು   ನಿಂತಿದ್ದ. ಆದರೆ, ಎಂಗ್ಲರ್‌ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ  ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ  ಸಾಕಷ್ಟು ಲೈಕ್  ಕಾಮೆಂಟ್ ಬಂದಿದೆ.

ಹಾವನ್ನು ಕಂಡ ಬಳಿಕ ಜನ್ನಾ ಬಾತ್‌ ರೂಮ್‌ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್‌ ರೂಮ್‌ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ  ಸಾಗಿಸಲಾಗಿದೆ ಎಂದಿದ್ದಾರೆ .  ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ  ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ  ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು  ನಡೆಸಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…