ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು. ಬಾಕಿ ಇಲಿಗಳು ಹಾವಿನ ಬಾಯಿಯಿಂದ ತಪ್ಪಿಸಿಕೊಂಡು ಓಡಿದರೆ ಒಂದು ಮಾತ್ರ ಹೆಬ್ಬಾವಿಗೆ ಆಹಾರವಾಗಿತ್ತು. ಈ ಭಯಾನಕ ದೃಶ್ಯ ಕಂಡ ಮಹಿಳೆ ಹೆದರಿ ತಕ್ಷಣ ತನ್ನ ಮಗ ಮಲಗಿದ್ದ ಕೋಣೆ ಹೋಗಿ ಮಗನನ್ನೂ ಎಬ್ಬಿಸಿದ್ದರು.
ಆದರೆ, ಈ ಘಟನೆಯಿಂದ ಎಂಗ್ಲರ್ ಭಯಗೊಂಡಿದ್ದರೆ ಮಗ ಮಾತ್ರ ತುಂಬಾ ಕುತೂಹಲಿಗನಾಗಿದ್ದ. ಕಾರಣ, ಹಾವು ಇಲಿಯನ್ನು ಬೇಟೆಯಾಡುವುದನ್ನು ಆತ ನೋಡಿರಲಿಲ್ಲ. ಇದೇ ಕಾರಣಕ್ಕೆ ಮಗ ಅಮ್ಮನನ್ನೂ ಕರೆದುಕೊಂಡು ಹೆಬ್ಬಾವಿನ ಇಲಿ ಬೇಟೆಯನ್ನು ನೋಡಲು ನಿಂತಿದ್ದ. ಆದರೆ, ಎಂಗ್ಲರ್ ಮಾತ್ರ ಭಯದಲ್ಲಿ ನಡುಗುತ್ತಿದ್ದರು, ಅವರ ಧ್ವನಿಯೂ ಕಂಪಿಸುತ್ತಿತ್ತು… ಈ ಭಯದ ನಡುವೆಯೇ ಜನ್ನಾ ಈ ಹೆಬ್ಬಾವಿನ ಇಲಿ ಶಿಕಾರಿಯ ಫೋಟೋಗಳನ್ನು ತೆಗೆದಿಟ್ಟುಕೊಂಡಿದ್ದರು. ಇದನ್ನು ಜನ್ನಾ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಸಾಕಷ್ಟು ಲೈಕ್ ಕಾಮೆಂಟ್ ಬಂದಿದೆ.
ಹಾವನ್ನು ಕಂಡ ಬಳಿಕ ಜನ್ನಾ ಬಾತ್ ರೂಮ್ನ ಬಾಗಿಲನ್ನು ಮುಚ್ಚಿದ್ದರು. ಸಣ್ಣ ಸಣ್ಣ ರಂಧ್ರಗಳಿಗೂ ಬಟ್ಟೆ ಇಟ್ಟು ಹಾವು ಮನೆಯೊಳಗೆ ಬರದಂತೆ ತಡೆದಿದ್ದರು. ಬಳಿಕ ಇವರು ಕೆಲಸಕ್ಕೆ ಹೋಗಿದ್ದರು. ಇಲ್ಲಿಂದ ಮರಳಿದ ಬಳಿಕ ಬಾತ್ ರೂಮ್ನ ಬಾಗಿಲು ತೆಗೆದರೆ ಹೆಬ್ಬಾವು ಇರಲಿಲ್ಲ. ಆದರೆ, ಇಲಿಗಳು ಸತ್ತು ಬಿದ್ದಿದ್ದವು. ಉರಗ ಸೆರೆ ಹಿಡಿಯುವವರು ಬಂದು ಹುಡುಕಿದಾಗಲೂ ಹಾವು ಪತ್ತೆಯಾಗಿರಲಿಲ್ಲ. ಬಹುಶಃ ಅಂದು ಹಾವು ಪೈಪಿನ ಮೂಲಕ ಹೊರಗೆ ಹೋಗಿರಬಹುದು ಎಂದು ಎಂಗ್ಲರ್ ಹೇಳಿಕೊಂಡಿದ್ದಾರೆ.
ಇದಾದ ಬಳಿಕ ಮತ್ತೆ ಎಂಗ್ಲರ್ ತಮ್ಮ ಮನೆಯ ಆವರಣದಲ್ಲಿ ಮತ್ತೆ ಹೆಬ್ಬಾವನ್ನು ಕಂಡಿದ್ದರು. ತಕ್ಷಣ ಇವರು ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಇವರು ಈ ಹೆಬ್ಬಾವನ್ನು ಸೆರೆ ಹಿಡಿಸಿದ್ದಾರೆ. ಬಳಿಕ ಈ ಹಾವನ್ನು ಹಿಡಿದು ಸುರಕ್ಷಿತವಾಗಿ ಬೇರೆ ಕಡೆಗೆ ಸಾಗಿಸಲಾಗಿದೆ ಎಂದಿದ್ದಾರೆ . ಇದಕ್ಕೂ ಮೊದಲು ಇದೇ ಪ್ರದೇಶದಲ್ಲಿ ಇಂತಹದ್ದೇ ಮತ್ತೊಂದು ಘಟನೆಯೂ ಸಹ ನಡೆದಿತ್ತು. ಈ ಫೋಟೋಗಳನ್ನು ಹಾವು ರಕ್ಷಿಸುವ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಸದ್ಯ ಇಂತಹ ಘಟನೆಯಿಂದ ಜನರು ತುಂಬಾ ಭಯಭೀತರಾಗಿದ್ದಾರೆ. ಯಾವಾಗ ಮನೆಯೊಳಗೆ ಹಾವು ಕಾಣಿಸಿಕೊಳ್ಳುತ್ತದೋ ಎಂಬ ಆತಂಕದಲ್ಲೇ ಇವರು ಜೀವನವನ್ನು ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…