ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ ಅವರು ಈಗ ಕೆಬಿಸಿ 11ನೇ ಆವೃತ್ತಿ ಕಾರ್ಯಕ್ರಮದಿಂದ ಕೋಟ್ಯಧಿಪತಿ ಆಗಿದ್ದಾರೆ.
80 ಸಾವಿರದ ಪ್ರಶ್ನೆಗೆ ಬಬಿತಾ ಅವರು ತಮ್ಮ ಮೊದಲ ಲೈಫ್ಲೈನ್ ಬಳಸಿದ್ದರು. ಆ ಪ್ರಶ್ನೆಯೂ ಪುರಾಣ ಕಥೆಗೆ ಸಂಬಂಧಿಸಿದಾಗಿತ್ತು. ಅದಕ್ಕೆ ಅವರು ಆಡಿಯನ್ಸ್ ಪೋಲ್ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ತಮ್ಮ 1.6 ಲಕ್ಷ ರೂ. ಪ್ರಶ್ನೆಗೆ ಬಬಿತಾ ಅವರು ತಮ್ಮ ಎರಡನೇ ಲೈಫ್ಲೈನ್ ಬಳಸಿಕೊಂಡಿದ್ದರು. ಆಗ 50:50 ಆಯ್ಕೆ ಮಾಡಿಕೊಂಡು ಸರಿಯಾದ ಉತ್ತರ ಕೊಟ್ಟಿದ್ದರು. ಬಳಿಕ 50 ಲಕ್ಷದ ಪ್ರಶ್ನೆಗೆ ಅವರು ತಮ್ಮ ಮೂರನೇ ಲೈಫ್ಲೈನ್ ಉಪಯೋಗಿಸಿಕೊಂಡರು. ಬಳಿಕ ಕೊನೆ ಹಂತ 1 ಕೋಟಿ ಪ್ರಶ್ನೆಗೆ ಎಕ್ಸಪರ್ಟ್ ಲೈಫ್ಲೈನ್ ತೆಗೆದುಕೊಂಡು ಕೋಟ್ಯಧಿಪತಿಯಾದರು.
“ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ಆಸ್ಥಾನದಲ್ಲಿ ಯಾವ ಕವಿ 1857ರ ದಂಗೆಯ ಕುರಿತಾದ ತಮ್ಮ ವೈಯಕ್ತಿಕ ದಸ್ತಾನ್-ಎ-ಗದರ್ ನ್ನು ಬರೆದಿದ್ದಾರೆ?” ಇದು ಬಬಿತಾ ಅವರ 1 ಕೋಟಿಗೆ ಬಿಗ್ ಬಿ ಕೇಳಿದ ಪ್ರಶ್ನೆಯಾಗಿತ್ತು. ಅಂತಿಮವಾಗಿ ಬಬಿತಾ ಅವರಿಗೆ ಜಾಕ್ ಪಾಟ್ ಪ್ರಶ್ನೆಯಾಗಿ “ಈ ಕೆಳಗಿನ ಯಾವ ರಾಜ್ಯಗಳಲ್ಲಿನ ಅಧಿಕ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳಾಗಿದ್ದಾರೆ” ಎಂದು ಕೇಳಲಾಗಿತ್ತು. ಆಗ ಅವರಿಗೆ ಉತ್ತರ ಖಚಿತವಿರದಿದ್ದ ಕಾರಣಕ್ಕೆ ಅವರು ಆಟವನ್ನು ಬಿಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಅಮಿತಾಬ್ ಯಾವ ಉತ್ತರ ಸರಿ ಇರಬಹುದು ಎಂದು ಕೇಳಿದಾಗ ಅವರು ಬಿಹಾರ ಎಂದು ಉತ್ತರಿಸಿದರು. ಆದರೆ ಬಬಿತಾ ಅವರ ಉತ್ತರ ಸರಿಯಾಗಿತ್ತು. ಒಂದು ವೇಲೆ ಬಬಿತಾ ಅವರು ಆಟವನ್ನು ಬಿಡದೆ ಮುಂದುವರಿಸಿದ್ದರೆ ಇಂದು 7 ಕೋಟಿಯ ಒಡತಿಯಾಗುತ್ತಿದ್ದರು.
ತಿಂಗಳಿಗೆ 1,500 ರೂ. ಸಂಬಳ ಪಡೆಯುತ್ತಿದ್ದ ಬಿಸಿಯೂಟ ತಯಾರು ಮಾಡುವ ಸಿಬ್ಬಂದಿ 1 ಕೋಟಿ ರೂ. ಗೆದ್ದಿದ್ದಕ್ಕೆ ಅಮಿತಾಬ್ ಬಚ್ಚನ್ ಕೂಡ ಖುಷಿಯಾದರು. ಬಬಿತಾ ಅವರು 3.2 ಲಕ್ಷ ರೂ. ಗೆದ್ದಾಗ ಈ ಹಣವನ್ನು ಏನು ಮಾಡುತ್ತಿರಿ ಎಂದು ಬಿಗ್ ಬಿ ಕೇಳಿದ್ದರು. ಈ ಹಣದಿಂದ ನಾನು ಮೊಬೈಲ್ ಖರೀದಿಸುತ್ತೇನೆ ಎಂದು ಬಬಿತಾ ಅವರು ಹೇಳಿದ್ದರು. ಇದನ್ನು ನೆನಪಿಟ್ಟುಕೊಂಡು ಬಿಗ್ಬಿ ಬಬಿತಾ ಅವರಿಗೆ ಹೊಸ ಮೊಬೈಲ್ ಉಡುಗೊರೆಯಾಗಿ ನೀಡಿದ್ದಾರೆ. ಬಬಿತಾ ಅವರು ಕೆಬಿಸಿ 11 ಕಾರ್ಯಕ್ರಮದಲ್ಲಿ ಕೇವಲ 1 ಕೋಟಿಯ ಮಾತ್ರವಲ್ಲ ಪ್ರೇಕ್ಷಕರ ಮನಸ್ಸನ್ನು ಕೂಡ ಗೆದ್ದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…